ಇನ್ನು ಪಾದರಾಯನಪುರು, ಗೌರಿಪಾಳ್ಯ, ಮೈಸೂರು ರಸ್ತೆ ಸುತ್ತಮುತ್ತಲ ಪ್ರದೇಶದಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಮಿತಿ ಮೀರಿದ್ದು, ರಾತ್ರಿಯಾಗುತ್ತಿದ್ದಂತೆಯೇ ರಸ್ತೆಗಿಳಿಯುವ ಇವರು ದಾರಿಹೋಕರ ಮೇಲೆ ದಾಳಿ ಮಾಡಿ ಹಣ, ಒಡವೆ ಮತ್ತು ಮೊಬೈಲ್ ಗಳನ್ನು ಕಿತ್ತುಕೊಳ್ಳುತ್ತಾರೆ. ಸಾಕಷ್ಚು ಬಾರಿ ಪೊಲೀಸರಿಗೆ ಈ ಬಗ್ಗೆ ಸ್ಥಳೀಯರು ದೂರು ನೀಡಿದ್ದರೂ, ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವಿದೆ. ಬಂಧನವಾದರೂ ಆರೋಪಿಗಳು ಕೆಲವೇ ದಿನಗಳಲ್ಲಿ ಬಿಡುಗಡೆಯಾಗಿ ಮತ್ತೆ ತಮ್ಮ ಆಟಾಟೋಪ ಮುಂದುವರೆಸುತ್ತಾರೆ ಎಂದು ಸ್ಥಳೀಯರು ತಮ್ಮ ಅಳಲು ತೋಡಿಕೊಂಡಿದ್ದಾರೆ.