ಲೋಕಾಯುಕ್ತ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಂತರ ನಿಲುವಳಿ ಸೂಚನೆ ವಿರುದ್ಧ ಹೈಕೋರ್ಟ್ ನ ನ್ಯಾ.ಎಎಸ್ ಭೋಪಣ್ಣ ಅವರು ಮಧ್ಯಂತರ ಆದೇಶ ಹೊರಡಿಸಿದ್ದು, ವಿಧಾನಸಭಾಧ್ಯಕ್ಷರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಪ್ರಕರಣದಲ್ಲಿ ಹೆಸರಿಸಲಾಗಿದ್ದವರಿಗೆ ನೊಟೀಸ್ ಜಾರಿ ಮಾಡಲಾಗಿದೆ.