ಬೆಳಗಾವಿಯ ಕೆ.ಎಲ್.ಇ. ಜೀರಗಿ ಸಭಾಭವನದಲ್ಲಿ ನಿನ್ನೆ ನಡೆದ ಸಮಾರಂಭವೊಂದರಲ್ಲಿ ಮಾತನಾಡಿರುವ ಅವರು, ಸೋ ಕಾಲ್ಡ್ ಬುದ್ಧಿ ಜೀವಿಗಳು ಬರೆದಿದ್ದೆಲ್ಲಾ ಸಾಹಿತ್ಯ, ಗೀಚಿದ್ದೆಲ್ಲಾ ಕಾವ್ಯವಾಗಿರುತ್ತದೆ. ಸಾಹಿತಿಗಳ ಬರವಣಿಗೆಗೆ ಅರ್ಥವೂ ಇರುವುದಿಲ್ಲ, ತಲೆಬುಡವೂ ಇರುವುದಿಲ್ಲ. ಅವರಿಗೆ ಯಾವುದೋ ಸರ್ಕಾರಿ ನಿವೇಶನ ಬೇಕಾಗಿರುತ್ತದೆ. ಅದಕ್ಕಾಗಿ ವಿಚಾರವಾದಿಗಳ ಪಟ್ಟ ಕಟ್ಟಿಕೊಂಡಿರುತ್ತಾರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.