ಇಂದು ಬೆಳಗ್ಗೆ ಹೇಮಲಂಬಿ ಸಂವತ್ಸರದ ಮಾಘ ಮಾಸ ಶುಕ್ಲ ಪಾಡ್ಯದ ದಿನದಂದು, ನಸುಕಿನ ಎರಡು ಗಂಟೆಗೆ ಆರಂಭವಾದ ಪರ್ಯಾಯ ಪೂಜಾ ವಿಧಿವಿಧಾನಗಳನ್ನು ಮುಗಿಸಿಕೊಂಡು, ಭವ್ಯ ಮೆರವಣಿಗೆಯ ಮೂಲಕ ರಥಬೀದಿಗೆ ಆಗಮಿಸಿದ ಪಲಿಮಾರು ಶ್ರೀಗಳನ್ನು ದಾಖಲೆ ಐದನೇ ಬಾರಿಗೆ ಯಶಸ್ವಿಯಾಗಿ ಪರ್ಯಾಯವನ್ನು ಮುಗಿಸಿರುವ ಪೇಜಾವರ ಹಿರಿಯ ಮತ್ತು ಕಿರಿಯ ಶ್ರೀಗಳು ಕೃಷ್ಣಮಠಕ್ಕೆ ಸ್ವಾಗತಿಸಿದರು.