ರಾಜ್ಯ
ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ
ಈ ಹಿಂದೆ ವಿಷಪೂರಿತ ನೊರೆಯಿಂದ ಸುದ್ದಿಯಾಗಿದ್ದ ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಶುಕ್ರವಾರ ಮತ್ತೆ ಬೆಂಕಿ ಕಾಣಿಸಿಕೊಂಡು...
ಬೆಂಗಳೂರು: ಈ ಹಿಂದೆ ವಿಷಪೂರಿತ ನೊರೆಯಿಂದ ಸುದ್ದಿಯಾಗಿದ್ದ ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಶುಕ್ರವಾರ ಮತ್ತೆ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದ್ದು, ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ.
ವಿಷಯುಕ್ತ ನೊರೆ ಉಗುಳುತ್ತಿರುವ ಬೆಳ್ಳಂದೂರು ಕೆರೆ ಪುನಶ್ಚೇತನಕ್ಕೆ ಸರ್ಕಾರ ಕೋಟಿ ಕೋಟಿ ವೆಚ್ಚ ಮಾಡಿದರೂ ಯಾವುದೇ ಪ್ರಯೋಜನೆ ಆಗಿಲ್ಲ. ಇಂದು ಮತ್ತೆ ಯೆಮ್ಲೂರು ಬದಿಯ ಬೆಳ್ಳಂದೂರು ಕೆರೆಯಲ್ಲಿ ಹೊಗೆ ಕಾಣಿಸಿಕೊಂಡಿದೆ.
ಕಳೆದ ವರ್ಷ ಫೆ.16ರಂದು ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ದಟ್ಟ ಹೊಗೆ ಮತ್ತು ಬೆಂಕಿ ಆವರಿಸಿದ್ದರಿಂದ ಸ್ಥಳೀಯರು ಆತಂಕಗೊಂಡಿದ್ದರು. ಮೂರು ವರ್ಷಗಳ ಹಿಂದೆ ಕೂಡ ಇದ್ದಕ್ಕಿದ್ದಂತೆ ಬೆಳ್ಳಂದೂರು ಕೆರೆಯಲ್ಲಿ ಭಾರೀ ನೊರೆ ಹಾಗೂ ಬೆಂಕಿ ಕಾಣಿಸಿಕೊಂಡಿತ್ತು.