ಮೈಸೂರು ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಯನ್ನು ತಾವು ನಿರಾಕರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on
ಬೆಂಗಳೂರು: ಮೈಸೂರು ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಯನ್ನು ತಾವು ನಿರಾಕರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. 
ಮೈಸೂರು ವಿವಿ ತಮಗೆ ಗೌರವ ಡಾಕ್ಟರೇಟ್ ನೀಡಲು ಮುಂದಾಗಿದೆ ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ನಾನು ಯಾವುದೇ ಪಿಎಚ್ ಡಿ ಮಾಡಿಲ್ಲ. ಹೀಗಾಗಿ ನನಗೆ ಗೌರವ ಡಾಕ್ಟರೇಟ್ ಬೇಡ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.
ನಿನ್ನೆಯಷ್ಟೆ 2018ನೇ ಸಾಲಿನ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಿದ್ದರಾಮಯ್ಯ ಅವರಿಗೆ ಗೌರವ ಡಾಕ್ಟರೇಟ್ ನೀಡುವಂತೆ ವಿವಿಯ ಸಿಂಡಿಕೇಟ್ ಸದಸ್ಯ ಎಂಎಸ್‍ಎಸ್ ಕುಮಾರ್ ಅವರು ವಿವಿ ಕುಲಪತಿಗೆ ಮನವಿ ಮಾಡಿರುವುದಾಗಿ ಹೇಳಿದ್ದರು. 
ಸಮಾಜದಲ್ಲಿ ಗಣ್ಯವ್ಯಕ್ತಿಗಳಿಗೆ ನೀಡುವ ಗೌರವ ಡಾಕ್ಟರೇಟ್ ಪದವಿಗೆ ಸಿದ್ದರಾಮಯ್ಯ ಅವರು ಅರ್ಹರಿದ್ದಾರೆ. ಅವರು ಇದೇ ವಿವಿಯಲ್ಲಿ ಪದವಿ ಕೂಡ ಪಡೆದಿದ್ದಾರೆ. ಮೈಸೂರಿನಿಂದ ಹೋಗಿ ರಾಜ್ಯದ ಚುಕ್ಕಾಣಿ ಹಿಡಿದು ಉತ್ತಮ ಆಡಳಿತ ನಡೆಸಿದ್ದಾರೆ. ಇಂಥವರಿಗೆ ಡಾಕ್ಟರೇಟ್ ನೀಡಿದರೆ ಮೈಸೂರು ವಿವಿಯ ಘನತೆ ಹೆಚ್ಚಲಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯನವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ನೀಡುವಂತೆ ಶಿಫಾರಸು ಮಾಡುತ್ತಿದ್ದೇನೆ ಎಂದು ಸಿಂಡಿಕೇಟ್ ಸದಸ್ಯ ಕುಮಾರ್ ಪತ್ರದಲ್ಲಿ ವಿವರಿಸಿದ್ದರು.
ಇದರ ಜೊತೆಗೆ ಇತರೆ ಸಿಂಡಿಕೇಟ್ ಸದಸ್ಯರು ಸುತ್ತೂರು ಶ್ರೀ, ಸಾಲು ಮರದ ತಿಮ್ಮಕ್ಕ, ಇಸ್ರೋ ಅಧ್ಯಕ್ಷ ಕಿರಣ್‍ಕುಮಾರ್ ಅವರಿಗೆ ಕೂಡ ಗೌರವ ಡಾಕ್ಟರೇಟ್ ನೀಡುವಂತೆ ಶಿಫಾರಸು ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com