ಇದೇ ಜನವರಿ 25ರಂದು ಕನ್ನಡ ಚಳವಳಿ ಪಕ್ಷದ ಮುಖ್ಯಸ್ಥ ಹಾಗೂ ಕನ್ನಡಪರ ಹೋರಾಟಗಾರರ ಒಕ್ಕೂಟದ ಮುಖಂಡ ವಾಟಾಳ್ ನಾಗರಾಜ್ ಕರೆ ನೀಡಿದ್ದ ಬಂದ್ಗೆ ಮಹದಾಯಿ ಹೋರಾಟಗಾರರಿಂದಲೇ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬಂದ್ ಕುರಿತಂತೆ ಚರ್ಚೆ ನಡೆಸಲು ಭಾನುವಾರ ಪತ್ರಿಕಾಗೋಷ್ಠಿ ಏರ್ಪಡಿಸಲಾಗಿತ್ತು. ಜನವರಿ 25ರಂದು ಸಮಗ್ರ ಕರ್ನಾಟಕ ಬಂದ್ ಮಾಡಲಾಗುವುದು ಹಾಗೂ ಫೆಬ್ರವರಿ 4ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು, ಅಂದೂ ಕೂಡ ರಾಜ್ಯ ರಾಜಧಾನಿಗೆ ಬಂದ್ ಮಾಡಲಾಗುವುದು ಮತ್ತು ಕಪ್ಪು ಬಾವುಟ ತೋರಿಸಿ ಪ್ರತಿಭಟಿಸಲಾಗುವುದು ಎಂದು ವಾಟಳ್ ನಾಗರಾಜ್ ಅವರು ತಿಳಿಸಿದರು.