ಸರ್ಕಾರ ಯೋಜನೆಯ ಪರವಾಗಿದ್ದು, ಯೋಜನೆ ಕುರಿತ ವರದಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಶಿವಾನಂದ ವೃತ್ತದ ಬಳಿ ಹೆಚ್ಚು ಸಂಚಾರ ದಟ್ಟಣೆ ಉಂಟಾಗಲಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಸಂಚಾರ ದಟ್ಟಣೆ ಉಂಟಾಗುತ್ತದೆ. ಈ ಸಂದರ್ಭದಲ್ಲಿ 11 ಸಾವಿರಕ್ಕೂ ಹೆಚ್ಚು ಕಾರುಗಳು ಸಂಚಾರ ಮಾಡುತ್ತವೆ. ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಯೋಜನೆ ರೂಪಿಸಿದ್ದು, ಯೋಜನೆಗೆ ವಿರೋಧ ವ್ಯಕ್ತಪಡಿಸಿ ಸಲ್ಲಿಕೆಯಾಗಿರುವ ಅರ್ಜಿಗಳು ಹಾಗೂ ಅರ್ಜಿಯಲ್ಲಿ ಅರ್ಜಿದಾರರು ತಮ್ಮ ವಿರೋಧಕ್ಕೆ ನೀಡಿರುವ ಕಾರಣಗಳು ತಾಂತ್ರಿಕವಾಗಿ ಅಥವಾ ಬೇರಾವುದೇ ಪ್ರಕ್ರಿಯೆಯಲ್ಲೂ ಬಲವಾಗಿಲ್ಲ. ಹೀಗಾಗಿ ಸೇತುವೆ ನಿರ್ಮಾಣ ಪ್ರಮುಖವಾಗಿದೆ.