ಮೈಸೂರು ಮೂಲದ ವಿಜೇಶ್ ಎನ್ನುವವರ ಕುಟುಂಬ ಮಧ್ಯಪ್ರದೇಶ ಉಜ್ಜಯಿನಿಯಿಂದ ಮೈಸೂರಿಗೆ ಹೊರಟಿದ್ದು ಇದಕ್ಕಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿತ್ತು. ಆದರೆ ರೈಲಿನಲ್ಲಿ ಅವರಿಗೆ ಸೂಕ್ತ ಆಸನ ವ್ಯವಸ್ಥೆ ಕಲ್ಪಿಸಿಕೊಡುವಲ್ಲಿ ರೈಲ್ವೆ ಇಲಾಖೆ ನಿರ್ಲಕ್ಷ ತಾಳಿತ್ತು. ಇದರಿಂದ ಕೋಪಗೊಂಡ ಕುಟುಂಬಸ್ಥರು ಈ ಬಗ್ಗೆ ಗ್ರಾಹಕ ನ್ಯಾಯಾಲಯಕ್ಕೆ ದೂರು ಸಲ್ಲಿಸಿತ್ತು..