ರೈತರು, ಕೃಷಿಕರು, ಕಾರ್ಮಿಕರು ಹಾಗು ಇನ್ನಿತರೆ ವಲಯಗಳಿಗೆ ಸಹಾಯವಾಗುವ ಸಲುವಾಗಿ ಸರ್ಕಾರ ಚುನಾವಣೆಗೂ ಮುನ್ನ ಬಜೆಟ್ ಮಂಡನೆ ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಜೆಟ್ ನಲ್ಲಿ ಘೋಷಣೆ ಮಾಡಿದ್ದನ್ನು ಸರ್ಕಾರ ಅನುಷ್ಠಾನಕ್ಕೆ ತರಲಿದೆ. ಒಂದು ವೇಳೆ ಬಿಜೆಪಿ ಅಥವಾ ಜೆಡಿಎಸ್ ಅಧಿಕಾರಕ್ಕೆ ಬಂದರೆ, ಅವುಗಳಲ್ಲಿ ಬದಲಾವಣೆಗಳನ್ನು ತರಬಹುದು ಎಂದು ಆರ್ಥಿಕ ತಜ್ಞ ಆರ್.ಎಸ್. ದೇಶಪಾಂಡೆಯವರು ತಿಳಿಸಿದ್ದಾರೆ.