ಬೆಂಗಳೂರು: ಪ್ರಿಯತಮ ಕೈಕೊಟ್ಟಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ

ಪ್ರಿಯತಮ ಕೈ ಕೊಟ್ಟಿದ್ದರಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗರಭಾವಿಯಲ್ಲಿ ನಡೆದಿದೆ.
ಆತ್ಮಹತ್ಯೆಯ ಸಾಂದರ್ಭಿಕ ಚಿತ್ರ
ಆತ್ಮಹತ್ಯೆಯ ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಿಯತಮ ಕೈ ಕೊಟ್ಟಿದ್ದರಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗರಭಾವಿಯಲ್ಲಿ ನಡೆದಿದೆ.

ಚಾಮರಾಜನಗರದ ನಿಷ್ಕಲ್ಲಾ ಆತ್ಮಹತ್ಯೆ ಮಾಡಿಕೊಂಡು ದುರ್ದೈವಿ. ಶ್ರೀದೇವಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ನಿಷ್ಕಲ್ಲಾ  ಆಸ್ಪತ್ರೆಯಿಂದ ನೀಡಿದ್ದ ಕೊಠಡಿಯಲ್ಲಿಯೇ ವಾಸಿಸುತ್ತಿದ್ದಳು. ಇಂದು ಬೆಳ್ಳಿಗೆ 8 ಗಂಟೆ ಸುಮಾರಿನಲ್ಲಿ ಅದೇ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನಿಷ್ಕಲ್ಲಾ, ಸಹೋದ್ಯೋಗಿ ಗಂಗಾಧರ್ ಎಂಬವರನ್ನು ಪ್ರೀತಿಸುತ್ತಿದ್ದಳು. ಆದರೆ. ಕೆಲ ವಾರಗಳ ಹಿಂದೆ ಆತ ಪ್ರೀತಿಯನ್ನು ನಿರಾಕರಿಸಿದ್ದಾನೆ. ಅವರ ಪ್ರೀತಿಗೆ ಅವರ ಮನೆಯಲ್ಲಿ ವಿರೋಧ ಇತ್ತೆಂದು ಪೊಲೀಸರು ತಿಳಿಸಿದ್ದಾರೆ.

ಗಂಗಾಧರ್ ಮೋಸ ಮಾಡಿದ್ದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ನಿಷ್ಕಲ್ಲಾ ಪೋಷಕರು ಚಂದ್ರಲೇಔಟ್ ಪೊಲೀಸರಿಗೆ ದೂರು ನೀಡಿದ್ದಾರೆ.  ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com