ಇನ್ನು ಇದಕ್ಕೂ ಮೊದಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಮುಖ್ಯ ಕಾರ್ಯದರ್ಶಿ ರತ್ನಪ್ರಭ ಅವರಿಗೆ ಪತ್ರ ಬರೆದ ಬೆನ್ನಲ್ಲೇ, ರಾಜ್ಯ ಸರ್ಕಾರ ವರ್ಗಾವಣೆಗೆ ತಡೆ ನೀಡಿದೆ. ಅಂತೆಯೇ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಸಮ್ಮತಿ ನೀಡುವಂತೆ ಕೋರಿ ಮುಖ್ಯ ಚುನಾವಣಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ ಅವರೂ ಕೂ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದ್ದು, ಆಡಳಿತಾತ್ಮಕ ದೃಷ್ಟಿಕೋನದಿಂದ ವರ್ಗಾವಣೆ ಅವಶ್ಯಕವಾಗಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.