ಸುದ್ದಿಗಾರರೊಂದಿಗೆ ಮಾತನಾಡಿರುವ ಸಾರಿಗೆ ಆಯುಕ್ತ ಬಿ. ದಯಾನಂದ ಅವರು, ಪರಿಷ್ಕೃತ ದರ ನಗದಿ ಮಾಡುವಂತೆ ಈಗಾಗಲೇ ಕಂಪನಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ದರಗಳನ್ನು ನಿಗದಿ ಮಾಡುವುದು ಬಿಟ್ಟರೆ ಕಂಪನಿಗಳಿಗೆ ಬೇರಾವುದೇ ಆಯ್ಕೆಗಳಿಲ್ಲ. ಸರ್ಕಾರದ ಸೂಚನೆಯನ್ನು ಪಾಲನೆ ಮಾಡಲು ಸಾಧ್ಯವಿಲ್ಲ ಎಂಬ ಪ್ರಶ್ನೆಯೇ ಇಲ್ಲಿ ಬರುವುದಿಲ್ಲ. ಸಾಕಷ್ಟು ಸುದೀರ್ಘ ಪ್ರಕ್ರಿಯೆಗಳ ಬಳಿಕ ಪರಿಷ್ಕೃತ ದರ ನಿಗದಿ ಮಾಡುವಂತೆ ತಿಳಿಸಲಾಗಿದೆ. ಬದಲಾವಣೆಗಳನ್ನು ಮಾಡಲು ಕಂಪನಿಗಳು ಕಾಲಾವಕಾಶವನ್ನು ಕೇಳಿದೆ. ಹೀಗಾಗಿ ಕಾಲಾವಕಾಶವನ್ನು ನೀಡಲಾಗಿದೆ. ಶೀಘ್ರದಲ್ಲಿಯೇ ಕಂಪನಿಗಳೊಂದಿಗೆ ಸಭೆಯನ್ನು ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.