ಅಲ್ಪಸಂಖ್ಯಾತರ ವಿರುದ್ಧದ ಕೋಮುಗಲಭೆ ಪ್ರಕರಣ ವಾಪಸ್ ಪಡೆಯಲು ಸರ್ಕಾರದ ನಿರ್ಧಾರ: ವಿವಾದಕ್ಕೀಡಾದ ನಡೆ

ಅಲ್ಪಸಂಖ್ಯಾತರ ವಿರುದ್ಧ ದಾಖಲಾಗಿರುವ ಕೋಮುಗಲಭೆ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರಾಜ್ಯ ಸರ್ಕಾರದ ನಡೆ ವಿವಾದಕ್ಕೀಡಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಅಲ್ಪಸಂಖ್ಯಾತರ ವಿರುದ್ಧ ದಾಖಲಾಗಿರುವ ಕೋಮುಗಲಭೆ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರಾಜ್ಯ ಸರ್ಕಾರದ ನಡೆ ವಿವಾದಕ್ಕೀಡಾಗಿದೆ. 
2017 ರ ಡಿಸೆಂಬರ್ 22 ರಂದು ಹಾಗೂ 2018 ರ ಜನವರಿ 02 ರಂದು ಕರ್ನಾಟಕ ಡಿಜಿಪಿ ಮಂಗಳೂರು, ಬೆಳಗಾವಿ ಹಾಗೂ ವಿವಿಧ ಜಿಲ್ಲೆಗಳ ಇನ್ನೂ 21 ಎಸ್ ಪಿ ಗಳಿಗೆ ಬರೆದಿರುವ ಪತ್ರದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಇರುವ ಕೋಮು ಗಲಭೆ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಸೂಚನೆ ನೀಡಿದ್ದಾರೆ. 
"ಮುಗ್ಧ ಅಲ್ಪಸಂಖ್ಯಾತರ ವಿರುದ್ಧ ಇರುವ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಪತ್ರದಲ್ಲಿ ಸೂಚಿಸಲಾಗಿದ್ದು, ಕಳೆದ 5 ವರ್ಷಗಳಲ್ಲಿ ಅಲ್ಪಸಂಖ್ಯಾತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ನಡೆಗೆ ಹಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದು, ಬಹುಸಂಖ್ಯಾತರಲ್ಲಿ ಅಭದ್ರತೆ ಮೂಡಿಸುವಂತಹ ನಿರ್ಧಾರವಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com