ನಿವೃತ್ತ ಐಎಎಸ್ ಅಧಿಕಾರಿ ಡಾ.ಶಿವಾನಂದ ಚಾಮದಾರ್ ಮಾತನಾಡಿ, ವೀರಶೈವ-ಸೋಂಕು ಹರಡಲು ಕೆಲ ಮಠಾಧೀಶರೂ ಕಾರಣ. ಸಮಯ ಬಂದಾಗ ಅವರ ಹೆಸರನ್ನು ಬಹಿರಂಗಪಡಿಸುತ್ತೇನೆ. ಇದಲ್ಲದೆ, ವೇದಗಳನ್ನು ತಿರಸ್ಕರಿಸಿದ ಬೌದ್ಧರು, ಜೈನರು ಹಿಂದುಗಳಲ್ಲ ಎನ್ನುವುದಾದರೆ ಅದೇ ಕಾರಣಕ್ಕೆ ಲಿಂಗಾಯಿತರೂ ಹಿಂದೂಗಳಲ್ಲ. ವೇದಗಳನ್ನು ಅನೇಕ ರೀತಿಯಲ್ಲಿ ಖಂಡಿಸುವ ವಚನಗಳಿವೆ. ವಚನಕಾರ ಸಿದ್ದರಾಮ ವೇದ ಪುರಾಗಳನ್ನು ಸಮುದ್ರಕ್ಕೆ ಎಸೆಯಿರಿ ಎಂದಿದ್ದಾರೆ. ಹಾಗಾಗಿ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಿದೆ ಎಂದು ತಮ್ಮದೇ ವಾದ ಮಂಡಿಸಿದರು.