ಹಿಂಸಾಚಾರ ಕುರಿತಂತೆ ಹೇಳಿಕೆ ನೀಡಿರುವ ಭಾಗವಾಂತ್ ಖುಬಾ ಅವರು, ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ, ಅವರಾರೂ ಪ್ರತಿಭಟನಾಕಾರರಾಗಿರಲಿಲ್ಲ. ಜಿಲ್ಲಾ ಬಿಜೆಪಿ ಈಗಾಗಲೇ ಡಿಸಿಗೆ ಮನವಿ ಪತ್ರ ಸಲ್ಲಿಸಿದ್ದು, ಲಾಠಿ ಚಾರ್ಜ್ ಕುರಿತಂತೆ ನ್ಯಾಯಾಂಗ ತನಿಖೆಗೆ ನಡೆಸುವಂತೆ ಮನವಿಯಲ್ಲಿ ತಿಳಿಸಿದೆ ಎಂದು ಹೇಳಿದ್ದಾರೆ.