ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಂಸ್ಥೆಗಳು, ಗ್ರಾಮೀಣ ಪ್ರದೇಶ, ನೈರ್ಮಲ್ಯ, ವಿಕೇಂದ್ರೀಕರಣ, ರಸ್ತೆಗಳು, ನೀರು, ಗ್ರಾಮದ ಮೂಲಭೂತ ಸೌಕರ್ಯ ಮತ್ತು ಆಸ್ತಿಯ ನೋಂದಣಿ ಹೊಂದಿರುವ ದೊಡ್ಡ ಜವಾಬ್ದಾರಿಯಾಗಿದ್ದು, ಅಧಿಕಾರಿಗಳೊಂದಿನ ಸಭೆಗಳ ಬಳಿಕ ಎರಡು ಕ್ಷೇತ್ರಗಳ ಮೇಲೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಗ್ರಾಮಗಳಿಗೆ ಸೂಕ್ತ ರೀತಿಯ ನೀರಿನ ವ್ಯವಸ್ಥೆ, ರಸ್ತೆ ಸಂಪರ್ಕಗಳತ್ತ ಹೆಚ್ಚಿನ ಗಮನವನ್ನು ನೀಡಲಾಗುತ್ತಿದೆ. ಈ ಹಿಂದೆ ಇದ್ದ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ ಪಾಟೀಲ್ ಅವರು ತೆಗೆದುಕೊಂಡಿದ್ದ ನಿರ್ಧಾರಗಳನ್ನು ಕ್ರೋಢೀಕರಿಸಲು ಕಾರ್ಯನಿರ್ವಹಿಸಲಾಗುತ್ತಿದೆ.