ಮೊಬೈಲ್ ಗಳಲ್ಲಿ ಹೇಳಿಕೆ ರೆಕಾರ್ಡ್ ಮಾಡಿಕೊಂಡಿರುವ ಆತ ರಾಜಕಾರಣಿಗಳು ತನ್ನ ಸ್ವಂತದವರಿಗೆ ಮಾತ್ರ ಉದ್ಯೋಗ ನೀಡುತ್ತಿದ್ದಾರೆ.ಗ್ರಾಮೀಣ ಯುವಕರಿಗೆ ಯಾವ ಉದ್ಯೋಗ ದೊರೆಯುತ್ತಿಲ್ಲ. ಸರ್ಕಾರಗಳ ಈ ನಡೆಯಿಂದ ಬೇಸತ್ತು ನಾನು ಸಾವಿಗೆ ಶರಣಾಗುತ್ತಿದ್ದೇನೆ. ಕುಮಾರಸ್ವಾಮಿ ಅವರು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಗ್ರಾಮೀಣ ಪದವೀಧರರಿಗೆ ನ್ಯಾಯ ಸಿಗಬೇಕು.ನಾನೊಬ್ಬ ವಿದ್ಯಾರ್ಥಿಯಾಗಿ, ಬಡ ಕುಟುಂಬದ ವ್ಯಕ್ತಿಯಾಗಿ, ಯುವಕನಾಗಿ ಹಾಗೂ ನಿರುದ್ಯೋಗಿಯಾಗಿ ಸರ್ಕಾರಕ್ಕೆ ನನ್ನ ಸಾವಿನ ಮೂಲಕ ಸಂದೇಶ ನೀಡುತ್ತಿದ್ದೇನೆ.ಇನ್ನಾದರೂ ಉದ್ಯೋಗ ಸೃಷ್ಟಿ ಮಾಡಿ ಬಡತನ ನೀಗಿಸಲಿ ಎಂದು ಹೇಳಿದ್ದಾನೆ.