ಬೆಂಗಳೂರು: ಕರ್ನಾಟಕದ ಪ್ರತ್ಯೇಕ ನಾಡಧ್ವಜಕ್ಕೆ ಮಾನ್ಯತೆ ದೊರಕುವ ಕಾಲ ಇನ್ನೂ ಕೂಡಿಬಂದಂತೆ ಕಾಣುತ್ತಿಲ್ಲ. ವಿಧಾನಸಭೆ ಚುನಾವಣೆಗೆ ಮುನ್ನ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ಬಣ್ಣಗಳ ಹೊಸ ವಿನ್ಯಾಸದ ನಾಡಧ್ವಜವನ್ನು ಅನಾವರಣಗೊಳಿಸಿದ್ದರು. ಇದರ ಅಧಿಕೃತ ಮಾನ್ಯತೆಗಾಗಿ ಕೇಂದ್ರ ಸರ್ಕಾರವನ್ನು ಕೋರಲಾಗಿತ್ತು. ಆದರೆ ಸರ್ಕಾರ ಬದಲಾಗಿ ತಿಂಗಳಾದರೂ ಕೇಂದ್ರ ಸರ್ಕಾರ ಈ ಸಂಬಂಧ ಯಾವ ನಿರ್ಧಾರವನ್ನೂ ಪ್ರಕಟಿಸಲಿಲ್ಲ.