ಕಲಬುರ್ಗಿ: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಮೊದಲ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಿದರೂ...
ರಾಜಶೇಖರ್
ರಾಜಶೇಖರ್
ಕಲಬುರ್ಗಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಮೊದಲ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಿದರೂ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ.
ಕಳೆದ ಭಾನುವಾರ ಸಾಲ ಬಾಧೆಯಿಂದ  ಆತ್ಮಹತ್ಯೆಗೆ ಯತ್ನಿಸಿದ್ದ ಕಲಬುರ್ಗಿ ಜಿಲ್ಲೆಯ ಅಂಕಲಗಾ ಗ್ರಾಮದ ರೈತ ರಾಜಶೇಖರ್ ಜೇವರ್ಗಿ(45) ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಾವನ್ನಪ್ಪಿದ್ದಾರೆ.
ರಾಜಶೇಖರ್ ಅವರು 8 ಎಕರೆ ಕೃಷಿ ಭೂಮಿ ಹೊಂದಿದ್ದು, ಬ್ಯಾಂಕ್ ಅಲ್ಲದೇ ಕೈಸಾಲವಾಗಿ 15 ಲಕ್ಷ ರುಪಾಯಿ ಸಾಲ ಮಾಡಿದ್ದ ಎನ್ನಲಾಗಿದೆ.
ಈ ಸಂಬಂಧ ಕಲಬುರ್ಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com