ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದ ನೂರಾರು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್ ನಡೆಸಿದರು. ಕೆಲವೇ ನಿಮಿಷಗಳಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಲಾಠಿ ಚಾರ್ಜ್ ನಡೆಸಿದ ಪರಿಣಾಮ ಕೆಲ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.