ಜೆಡಿಎಸ್ ಸದಸ್ಯ. ಅ.ದೇವೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ಅನಧಿಕೃತ ಕಟ್ಟಡಗಳ ನಿರ್ಮಾಣ ತಡೆಗೆ ಅಗತ್ಯ ಹೊಸ ಕಾನೂನು ರಚನೆಗೆ ಚಿಂತನೆಗಳು ನಡೆಯುತ್ತಿವೆ. ಈ ಸಂಬಂಧ ಅನುಭವಿ ಶಾಸಕರು, ಕಾನೂನು ಪಂಡಿತರು ಹಾಗೂ ನಗರಾಭಿವೃದ್ಧಿ ತಜ್ಞರ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.