2015ರಲ್ಲಿ ರಾಜ್ಯ ಸಭೆ ಸದಸ್ಯ ಡಿ,ಕುಪೇಂದ್ರ ರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೆರೆ ಸ್ವಚ್ಚಗೊಳಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದರು. ಅರ್ಜಿ ಸಲ್ಲಿಸಿ ಮೂರು ವರ್ಷವಾದರೂ ಇದುವರೆಗೂ ಸರ್ಕಾರ ಕೆರೆ ಸ್ವಚ್ಛಗೊಳಿಸದಿರುವುದಕ್ಕೆ ಅಸಮಾಧಾನ ವ್ಯಕ್ತ ಪಡಿಸಿರುವ ಹೈಕೋರ್ಟ್ ಪೀಠ ಅವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದೆ,