ಶುಕ್ರವಾರ ಸಂಜೆ 4.30ರ ಸುಮಾರಿಗೆ ಪೂರ್ಣಿಮಾ ತನ್ನ ಮಗ ಅರುಣ್ ನನ್ನು ಶಾಲೆಯಿಂದ ಮನೆಗೆ ಕರೆದೊಯ್ಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಾರುತಿ ಎಸ್ಕೋ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಪೂನಂ ಕೆಜಿ ಹಳ್ಳಿ ಕಡೆಗೆ ತೆರಳುತ್ತಿದ್ದಳು. ಶಾಲಾ ಮಕ್ಕಳನ್ನು ಡ್ರಾಪ್ ಮಾಡಿದ ಬಳಿಕ ಅತಿಯಾದ ಮಳೆಯಲ್ಲಿ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡ ಪೂನಂ ವಾಹನವನ್ನು ಮನೆಯೊಂದರ ಕಂಪೌಂಡ್ ಗೆ ಡಿಕ್ಕಿ ಹೊಡೆಸಿದ್ದಾಳೆ. ಬಳಿಕ ವಾಹನವು ಪಾದಚಾರಿ ಮಾರ್ಗದಲ್ಲಿ ನಡೆಯುತ್ತಿದ್ದ ಪೂರ್ಣಿಮಾ ಮೇಲೆ ಹರಿದಿದೆ.