ರಾಜ್ಯದ ಜನತೆ ನನಗೆ ಬಹುಮತ ಕೊಟ್ಟು ಮುಖ್ಯಮಂತ್ರಿಯನ್ನಾಗಿ ಮಾಡಿಲ್ಲ, ನಾನು ಹೋದಕಡೆ ಜನ ಸೇರುತ್ತಾರೆ, ಸಂತೋಷ ಪಡ್ತಾರೆ, ಆದರೆ ದೌರ್ಭಾಗ್ಯವೆಂದರೆ ಅವರು ನಮ್ಮ ಪಕ್ಷಕ್ಕೆ ಮತ ನೀಡುವುದಿಲ್ಲ ಈ ಬಗ್ಗೆ ನನಗೆ ನೋವಿದೆ ಎಂದು ಸನ್ಮಾನ ಸಭೆಯಲ್ಲಿ ಕುಮಾರಸ್ವಾಮಿ ಭಾವುಕರಾಗಿ ನುಡಿದಿದ್ದಾರೆ. ನಾನು ಪೂರ್ಣ ಬಹುಮತ ದೊರೆತು ಸಿಎಂ ಆಗಿಲ್ಲ, ಸಧ್ಯಕ್ಕೆ ಸನ್ಮಾನ ಸ್ವೀಕರಿಸುವಂತೆ ಬಲವಂತ ಮಾಡಬೇಡಿ ಎಂದು ಕುಮಾರಸ್ವಾಮಿ ಸನ್ಮಾನವನ್ನು ನಿರಾಕರಿಸಿದ್ದಾರೆ.