ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಿ : ಬಿಬಿಎಂಪಿ ಅಧಿಕಾರಿಗಳಿಗೆ ಕುಮಾರಸ್ವಾಮಿ ನಿರ್ದೇಶನ

ರಾಜಧಾನಿ ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಯೋಜನೆಗಳನ್ನು ಕಾಲಮಿತಿಯಲ್ಲಿ  ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
 ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಷಾ  ನೇತೃತ್ವದಲ್ಲಿನ ಬಿ- ಪ್ಯಾಕ್  ತಂಡದ ಜೊತೆ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಕುಮಾರಸ್ವಾಮಿ,  ನಗರ ವ್ಯಾಪ್ತಿಯಲ್ಲಿ  ಪ್ರಗತಿಯಲ್ಲಿರುವ ಕಾಮಗಾರಿಗಳ ಪರಾಮರ್ಶೆಗಾಗಿ ತಿಂಗಳಿಗೊಮ್ಮೆ ಸಭೆ ನಡೆಸುವುದಾಗಿ ತಿಳಿಸಿದರು.
ಘನ ತ್ಯಾಜ್ಯ ನಿರ್ವಹಣೆ , ಸುಗಮ ಸಂಚಾರ ವ್ಯವಸ್ಥೆ ನಿರ್ಮಾಣ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು  ಸುದ್ದಿಗಾರರಿಗೆ ಷಾ ಹೇಳಿದರು.
 ಕೆಲವು ವಾರಗಳಲ್ಲಿ ನಗರದಲ್ಲಿ ಮಹತ್ತರವಾದ ಬದಲಾವಣೆ ತರುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ . ನಗರದಲ್ಲಿ ಅನೇಕ ಯೋಜನೆಗಳು ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೂ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ ಎಂದು ಮಜುಂದಾರ್ ಷಾ ನುಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com