ಕರ್ನಾಟಕ; ಇಂದಿನಿಂದ ಶಿರಾಡಿ ಘಾಟ್ ಸಂಚಾರ ಮುಕ್ತ

ಬೆಂಗಳೂರಿನಿಂದ ಹಾಸನ ಮಾರ್ಗವಾಗಿ ಕರಾವಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ರ 2ನೇ ಹಂತದ ಕಾಂಕ್ರಿಟ್ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಭಾನುವಾರದಿಂದ ಸಂಚಾರ ಮುಕ್ತಗೊಳ್ಳಲಿದೆ...
ಕರ್ನಾಟಕ; ಇಂದಿನಿಂದ ಶಿರಾಡಿ ಘಾಟ್ ಸಂಚಾರ ಮುಕ್ತ
ಕರ್ನಾಟಕ; ಇಂದಿನಿಂದ ಶಿರಾಡಿ ಘಾಟ್ ಸಂಚಾರ ಮುಕ್ತ
Updated on
ಮಂಗಳೂರು: ಬೆಂಗಳೂರಿನಿಂದ ಹಾಸನ ಮಾರ್ಗವಾಗಿ ಕರಾವಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ರ 2ನೇ ಹಂತದ ಕಾಂಕ್ರಿಟ್ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಭಾನುವಾರದಿಂದ ಸಂಚಾರ ಮುಕ್ತಗೊಳ್ಳಲಿದೆ. 
ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ಭಾನುವಾರ ಹಸಿರು ನಿಶಾನೆ ತೋರಲಿದ್ದು, ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್, ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. 
ರಸ್ತೆ ನಿರ್ಮಾಣ ಕಾರ್ಯಗಳನ್ನು ಪೂರ್ಣಗೊಳಿಸಲು ಮತ್ತೊಂದು ವಾರ ಕಾಲಾವಕಾಶಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ, ಈಗಾಗಲೇ ಎರಡು ಭಾರಿ ಗಡುವನ್ನು ವಿಸ್ತರಣೆ ಮಾಡಲಾಗಿದ್ದು, ಮತ್ತಷ್ಟು ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರ ನಿರಾಕರಿಸಿತ್ತು. ಶಿರಾಡಿ ಘಾಟ್ ರಸ್ತೆಯನ್ನು ಬಂದ್ ಮಾಡಿದ್ದರಿಂದಾಗಿ ಮಂಗಳೂರಿನಿಂದ ಬೆಂಗಳೂರಿಗೆ ಬರಲು 8-9 ಗಂಟೆಗಳ ಬದಲಾಗಿ 10-11 ಗಂಟೆಗಳ ಕಾಲ ತೆಗೆದುಕೊಳ್ಳುತ್ತಿದೆ. ರಸ್ತೆಯನ್ನು ಮುಕ್ತಗೊಳಿಸುವುದರಿಂದ ಸಾವಿರಾರು ಜನರಿಗೆ ಸಹಾಯಕವಾಗಲಿದೆ ಎಂದು ಪಿಡಬ್ಲ್ಯೂಡಿ ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com