ಹೈದರಾಬಾದ್ ನಲ್ಲಿ ಮಾತನಾಡಿದ ಟೆಕ್ಕಿ ಮಹಮದ್ ಅಜಮ್ ತಾಯಿ, ನನ್ನ ಮಗ ಸಾಫ್ಟ್ ವೇರ್ ಇಂಜಿನಿಯರ್. ಆತ ಎಂದೂ ಒಂದು ಸಣ್ಣ ಪ್ರಾಣಿಗೂ ಹಾನಿ ಮಾಡಿದನಲ್ಲ. ಹೀಗಿರುವಾಗ ಮಕ್ಕಳನ್ನು ಹೇಗೆ ಕದಿಯಲು ಸಾಧ್ಯ. ಮಕ್ಕಳ ಕಳ್ಳ ಎಂದು ಭಾವಿಸಿ ಆತನನ್ನು ಹೊಡೆದು ಕೊಂದು ಹಾಕಿದ್ದಾರೆ. ಇದು ನಿಜಕ್ಕೂ ಅಕ್ಷ್ಯಮ್ಯ. ನನ್ನ ಮಗ ಪಾಕಿಸ್ತಾನಕ್ಕೆ ಹೋಗಿರಲಿಲ್ಲ. ಕರ್ನಾಟಕಕ್ಕೆ ಹೋಗಿದ್ದ, ಆದರೂ ಆತನ್ನು ಕೊಂದು ಹಾಕಲಾಗಿದೆ ಎಂದು ಕಣ್ಣೀರು ಹಾಕಿದ್ದಾರೆ.