ಕಾವೇರಿ ಸಮಸ್ಯೆ ಕುರಿತು ಕರೆದಿರುವ ರಾಜ್ಯದ ಸಂಸದರ ಸಭೆಯ ಆಮಂತ್ರಣದ ಜೊತೆಗೆ ದುಬಾರಿ ಬೆಲೆಯ ಐ ಫೋನ್ ಹಾಗೂ ಲೆದರ್ ಬ್ಯಾಗ್ ನ್ನು ನೀಡಲಾಗಿರುವುದು ರಾಜೀವ್ ಚಂದ್ರಶೇಖರ್ ಅವರ ಪತ್ರದ ಮೂಲಕ ಬಹಿರಂಗಗೊಂಡಿದೆ. ಈ ಸುದ್ದಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ಸಂಸದರಿಗೆ ಗಿಫ್ಟ್ ಕೊಟ್ಟಿದ್ದು ನಾನೇ. ಒಳ್ಳೆಯ ಹೃದಯ ಶ್ರೀಮಂತಿಕೆಯಿಂದ ವೈಯಕ್ತಿಕವಾಗಿ ಗಿಫ್ಟ್ ನೀಡಿದ್ದೇನೆ, ಆದರೆ ಕಾಮಾಲೆ ಕಣ್ಣಿಗೆ ಎಲ್ಲವೂ ಕೆಟ್ಟದಾಗಿಯೇ ಕಾಣುತ್ತದೆ ಎಂದು ಹೇಳಿದ್ದಾರೆ.