ಸಂಗೀತ, ಸಾಹಿತ್ಯದಲ್ಲಿ ಶಿರೂರು ಶ್ರೀಗಳು ವಿಶೇಷ ಅಭಿಮಾನವನ್ನು ಹೊಂದಿದ್ದರು. ಇನ್ನು ಶ್ರೀಗಳು ಜಾತಿ ಆಧಾರಿತವಾಗಿ ಊಟೋಪಚಾರ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಪರ್ಯಾಯ ಸ್ವಾಗತ ಸಮಿತಿಗೆ ಅಧ್ಯಕ್ಷರನ್ನಾಗಿ ಬ್ರಾಹ್ಮಣ, ಜಿಎಸ್ಬಿ ಸಮುದಾಯದಿಂದ ಹೊರತಾಗಿ, ಮೊಗವೀರ ಸಮುದಾಯವರನ್ನು ನೇಮಿಸಿ, ಸುದ್ದಿಗೆ ಗ್ರಾಸವಾಗಿದ್ದರು. ಮೂರು ಪರ್ಯಾಯವನ್ನು ಯಶಸ್ವಿಯಾಗಿ ಪೂರೈಸಿದ್ದ ಶಿರೂರು ಶ್ರೀಗಳು, 1978-80ರಲ್ಲಿ ನಡೆದ ಮೊದಲ ಪರ್ಯಾಯದ ವೇಳೆ ಉಡುಪಿ ಶ್ರೀ ಕೃಷ್ಣ ಮಠದ ಪ್ರವೇಶಧ್ವಾರವನ್ನು ನವೀಕರಿಸಿದ್ದರು.