ಇಂದು ಉಡುಪಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಷ್ಠಮಠಗಳಲ್ಲಿನ ಹಿರಿಯ ಯತಿ ವಿಶ್ವೇಶ ತೀರ್ಥ ಶ್ರೀಗಳು, ಶಿರೂರು ಶ್ರೀಗಳ ನಿಗೂಢ ಸಾವಿನ ವಿಚಾರದಲ್ಲಿ ಅಷ್ಟ ಮಠಗಳ ಕಡೆಯಿಂದ ಯಾವುದೇ ತಪ್ಪುಗಳು ನಡೆದಿಲ್ಲ. ಅವರಿಗೆ ಕುಡಿಯುವ ಮತ್ತು ಮಹಿಳೆಯರ ಚಟವಿತ್ತು. ಹೆಣ್ಣು ಮತ್ತು ಹೆಂಡದ ಸಹವಾಸದಿಂದ ಸನ್ಯಾಸತ್ವಕ್ಕೆ ದ್ರೋಹ ಬಗೆದಿದ್ದಾರೆ ಎಂದರು.