ಇಂದು ತಮ್ಮ ತಾಯಿ ಜೊತೆ ವಿದ್ಯರಣ್ಯಪುರದಲ್ಲಿರುವ ಬಿಜೆಪಿ ಶಾಸಕರ ಕಚೇರಿಗೆ ಆಗಮಿಸಿದ ಪ್ರೇಮಕುಮಾರಿ, ರಾಮದಾಸ್ ಅವರು ನನನ್ನು ಪ್ರೀತಿಸಿ, ಮದುವೆಯಾಗುತ್ತೇನೆ ಎಂದು ಮಾತು ಕೊಟ್ಟಿದ್ದರು. ಆದರೆ ಇದೀಗ ಕೊಟ್ಟ ಮಾತನ್ನು ತಪ್ಪಿದ್ದಾರೆ ಎಂದು ಆರೋಪಿಸಿ ವೇಲ್ನಿಂದ ಕುತ್ತಿಗೆ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಅವಾಂತರ ಸೃಷ್ಟಿಸಿದರು.