ಬೆಂಗಳೂರು: ರಸ್ತೆ ಅಪಘಾತದಲ್ಲಿ ಯುವತಿ ಸಾವು, ನೇತ್ರ ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬ

ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್​ಬಾಗ್​ ಸಮೀಪ ನಡೆದಿದೆ.
ರಸ್ತೆ ಅಪಘಾತದಲ್ಲಿ ಯುವತಿ ಸಾವು, ನೇತ್ರ ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬ
ರಸ್ತೆ ಅಪಘಾತದಲ್ಲಿ ಯುವತಿ ಸಾವು, ನೇತ್ರ ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬ
Updated on
ಬೆಂಗಳೂರು: ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್​ಬಾಗ್​ ಸಮೀಪ ನಡೆದಿದೆ. 
ಮೃತಳನ್ನು ಪ್ರೀತಿ (19) ಎಂದು ಗುರುತಿಸಲಾಗಿದ್ದು ಇವರು ಸುರಾನ ಕಾಲೇಜ್ ನಲ್ಲಿ ಫ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. 
ಅಪಘಾತ ನಡೆದ ವೇಳೆ ಸ್ಕೂಟರ್ ಹಿಂಭಾಗದಲ್ಲಿ ಕುಳಿತಿದ್ದ ಲಾವಣ್ಯ(24) ಅವರಿಗೆ ಗಾಯಗಳಾಗಿದ್ದು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಸಲಾಗಿದೆ.
ಲಾವಣ್ಯ ಹಾಗು ಪ್ರೀತಿ ಸೋದರಿಯರಾಗಿದ್ದು ಅಪಘಾತದ ತಿವ್ರತೆಗೆ ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಮೃತ ಪ್ರೀತಿಯ ಪೋಷಕರು ಆಕೆ ಕಣ್ಣುಗಳ ದಾನಕ್ಕೆ ಸಮ್ಮತಿ ಸೂಚಿಸುವ ಮೂಲಕ ಸಾವಿನ ದುಃಖದಲ್ಲಿಯೂ ಸಾರ್ಥಕ್ಯತೆ ಮೆರೆದಿದ್ದಾರೆ.
ಅಪಘಾತ ನಡೆದ ಸ್ಥಳಕ್ಕೆ ವಿವಿ ಪುರಂ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com