'ಜಸ್ಟೀಸ್ ಫಾರ್ ಅಜಿತಾಭ್': ಸಿಬಿಐ ತನಿಖೆ ಆಗ್ರಹಿಸಿ ಆನ್'ಲೈನ್ ಅಭಿಯಾನ

ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ಕುಮಾರ್ ಅಜಿತಾಭ್ ಕುರಿತು ಈ ವರೆಗೂ ಯಾವುದೇ ಸುಳಿವುಗಳು ಸಿಗದ ಹಿನ್ನಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಆನ್'ಲೈನ್'ನಲ್ಲಿ 'ಜಸ್ಟಿಸ್ ಫಾನ್ ಅಜಿತಾಭ್' ಅಭಿಯಾನವನ್ನು ಆರಂಭಿಸಲಾಗಿದೆ...
ಅಜಿತಾಭ್
ಅಜಿತಾಭ್
Updated on
ಬೆಂಗಳೂರು: ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ಕುಮಾರ್ ಅಜಿತಾಭ್ ಕುರಿತು ಈ ವರೆಗೂ ಯಾವುದೇ ಸುಳಿವುಗಳು ಸಿಗದ ಹಿನ್ನಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಆನ್'ಲೈನ್'ನಲ್ಲಿ 'ಜಸ್ಟಿಸ್ ಫಾನ್ ಅಜಿತಾಭ್' ಅಭಿಯಾನವನ್ನು ಆರಂಭಿಸಲಾಗಿದೆ. 
ಅಜಿತಾಭ್ ನಾಪತ್ತೆ ಪ್ರಕರಣ ಕುರಿತಂತೆ ಹಲವಾರು ಜನರು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. 
ಆರೋಪಿಗಳನ್ನು ಸೆರೆಹಿಡಿಯರು ದೇಶದ ಪ್ರಧಾನಮಂತ್ರಿಗಳು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸಬೇಕು. ಸರ್ಕಾರವನ್ನು ಮಲಗಲು ಬಿಡುವುದಿಲ್ಲ. ಇಂದು ಅಜಿತಾಭ್ ನಾಳೆ ಬೇರೆ ಇನ್ನಾದರೂ ಆಗಬಹುದು. ನಾನೂ ಕೂಡ ಆಗಬಹುದು. #ಜಸ್ಟಿಸ್ ಫಾರ್ ಅಜಿತಾಭ್ ಎಂದು ಮಿಲಿಂದ್ ಕುಮಾರ್ ಎಂಬುವವರು ಟ್ವೀಟ್ ಮಾಡಿದ್ದಾರೆ. 
ಟೆಕ್ಕಿ ಅಜಿತಾಭ್ ಸಹೋದರಿಯಾಗಿರುವ ಪ್ರಜ್ಞಾ.ಎಸ್ ಟ್ವೀಟ್ ಮಾಡಿ, ನ್ಯಾಯಾಲಯ ವಿಚಾರಣೆಗಳಿಂದ ವಿಶ್ವಾಸಗಳು ಹೋಗಿವೆ. ಕಳೆದ ಜು.5 ರಂದು ನಡೆದ ವಿಚಾರಣೆ ಬಹಳ ಬೇಸರವನ್ನುಂಟು ಮಾಡಿದೆ. ತನಿಖೆಯಲ್ಲಿ ಯಾವುದೇ ಬೆಳವಣಿಗೆಗಳಿಲ್ಲದಿದ್ದರೂ. ಕುಟುಂಬಸ್ಥರು ವಿಚಾರಣೆಗೆ ಹಾಜರಾಗಬೇಕಿದೆ. ಪ್ರಸ್ತುತ ಅಜಿತಾಭ್ ಗಾಗಿ ಆನ್'ಲೈನ್ ಅಭಿಯಾನ ಆರಂಭವಾಗಿದ್ದು, ಸಂಬಂಧ ಅಧಿಕಾರಿಗಳಿಗೆ ಈ ಮೂಲಕ ವಿಷಯವನ್ನು ತಲುಪಿಸಲಾಗುತ್ತದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸುತ್ತೇವೆಂದು ಹೇಳಿದ್ದಾರೆ. 
ಅಜಿತಾಭ್ ನಾಪತ್ತೆಯಾಗಿ 217 ದಿನಗಳು ಕಳೆದಿವೆ. ಈ ವರೆಗೂ ಯಾವುದೇ ಬೆಳವಣಿಗೆಗಳು ಕಂಡು ಬಂದಿಲ್ಲ. ಫೆ.26ರಿಂದಲೂ ಸಿಐಡಿ ತನಿಖೆ ನಡೆಸುತ್ತಿದೆ. ಪೊಲೀಸರಿಗೆ, ಎಸ್ಐಟಿ ಹಾಗೂ ಸಿಐಡಿ ಅಧಿಕಾರಿಗಳಿಗೆ ಕಳೆದ 7 ತಿಂಗಳಿಂದಲೂ ತನಿಖೆಗೆ ಸಹಕಾರ ನೀಡಲಾಗುತ್ತಿದೆ. ಆದರೂ ಯಾವುದೇ ಸುಳಿವುಗಳು ಪತ್ತೆಯಾಗಿಲ್ಲ. ಯಾವ ದಿನದ ಸಮಯವನ್ನೂ ವ್ಯರ್ಥ ಮಾಡದೆ ಅಧಿಕಾರಿಗಳು ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು. ಇದು ನಾಗರೀಕರ ಭದ್ರತೆಗೆ ಸಂಬಂಧಿಸಿದ ವಿಚಾರವಾಗಿದೆ. ಪೊಲೀಸ್ ಇಲಾಖೆಯ ಹೆಮ್ಮೆಯ ವಿಚಾರವಲ್ಲ ಎಂದು ತಿಳಿಸಿದ್ದಾರೆ. 
ಬೆಳ್ಳಂದೂರಿನ ಬ್ರಿಟಿಷ್ ಟೆಲಿಕಾಂನಲ್ಲಿ ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಅಜಿತಾಭ್ ತನ್ನ ಸಿಯಾಜ್ ಕಾರನ್ನು ಮಾರಾಟ ಮಾಡುವ ಸಂಬಂಧ ಓಎಲ್ಎಕ್ಸ್ ನಲ್ಲಿ ಮಾಹಿತಿ ಹಾಕಿದ್ದರು. ಓಎಲ್ಎಕ್ಸ್ ನಲ್ಲಿ ಪ್ರಕಟಿಸಿದ ಬಳಿಕ ಅಜಿತಾಭ್ ಕರೆ ಬಂದಾಗಲೆಲ್ಲಾ ಕಾರು ಸಮೇತ ಹೊರ ಹೋಗಿ ಬರುತ್ತಿದ್ದರು. ಹೀಗೆ ಕಳೆದ ವರ್ಷ ಡಿಸೆಂಬರ್18 ರಂದು ಅವರ ಮೊಬೈಲ್'ಗೆ ಕರೆಯೊಂದು ಬಂದಿತ್ತು. ಹೊರಗೆ ಹೋದ ಅಜಿತಾಭ್ ಪುನಃ ವಾಪಸ್ ಆಗದೆ ನಿಗೂಢವಾಗಿ ನಾಪತ್ತೆಯಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com