ಬೆಂಗಳೂರು :ಅಮಾನ್ಯಗೊಂಡ ನೋಟು ಪರಿವರ್ತನೆಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ್ದ ಪ್ರಕರಣವೊಂದರಲ್ಲಿ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್, ಸಂಸದ ಡಿ. ಕೆ. ಸುರೇಶ್ ಸೇರಿದಂತೆ ಐವರಿಗೆ ಹೈಕೋರ್ಟ್ ನಿರೀಕ್ಷಿತ ಜಾಮೀನು ಮಂಜೂರು ಮಾಡಿದೆ.
ಸಿಬಿಐ ಮುಂದೆ ಏಳು ಬಾರಿ ವಿಚಾರಣೆಗೆ ಸಹಕರಿಸಿದ್ದಾರೆ ಎಂಬ ಆಧಾರದ ಮೇಲೆ ನ್ಯಾಯಾಧೀಶ ಶ್ರೀನಿವಾಸ್ ಹರೀಶ್ ಕುಮಾರ್ ಜಾಮೀನು ಮಂಜೂರು ಮಾಡಿದ್ದಾರೆ.
ಆರೋಪಿಗಳಾದ ಡಿ. ಕೆ. ಸುರೇಶ್ ಮಾಜಿ ಆಪ್ತ ಸಹಾಯಕ ಬಿ. ಪದ್ಮನಾಭಯ್ಯ, ಡಿ. ಕೆ. ಶಿವಕುಮಾರ್ ಆಪ್ತ ಸಹಾಯಕ ನಿವೃತ್ತ ಸರ್ಕಾರಿ ಅಧಿಕಾರಿ ಎಸ್. ಶೇಷಗಿರಿ. ಶಿವನಾಂದ್, ತಿಮ್ಮಯ್ಯ , ಪದ್ಮರೇಖಾ ಅವರಿಗೂ ಜಾಮೀನು ದೊರಕಿದೆ.
ಜೂನ್ 29 ರಂದು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು.
Advertisement