ಬೆಂಗಳೂರು: ಮಹಿಳೆಯ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಸ್ನೇಹಿತನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಉದ್ಯಮಿ ಸತೀಶ್ ಕುಮಾರ್ ಎಂಬುವರನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
ನಾಯಂಡಹಳ್ಳಿ ನಿವಾಸಿ ಲತೇಶ್ (30 ) ಮೃತ ವ್ಯಕ್ತಿಯಾಗಿದ್ದಾರೆ. ಆಟೋ ಚಾಲಕನಾಗಿದ್ದ ಲತೀಶ್ ಹಾಗೂ ಸತೀಶ್ ಹಲವು ವರ್ಷಗಳಿಂದ ಸ್ನೇಹಿತರಾಗಿದ್ದು, ಇಬ್ಬರು ಮಹಿಳೆಯೊಬ್ಬರನ್ನು ಪ್ರೀತಿಸುತ್ತಿದ್ದರು. ಈ ಮಹಿಳೆಯಿಂದ ದೂರ ಇರುವಂತೆ ಸತೀಶ್ ಹಲವು ಬಾರಿ ಲತೀಶ್ ಗೆ ಎಚ್ಚರಿಕೆ ನೀಡಿದ್ದು, ಕಳೆದ ನಾಲ್ಕು ತಿಂಗಳಿಂದ ಸಂಪರ್ಕ ಕಳೆದುಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Advertisement