ಅಪಘಾತ ಸಂಭವಿಸಿದ ವಿಚಾರ ತಿಳಿಯುತ್ತಿದ್ದಂತೆಯೇ ವಿನೋದ್ ಅವರನ್ನು ರಾಮಮೂರ್ತಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯ ಸಿಬ್ಬಂದಿಗಳು ಸರಿಯಾಗಿ ಚಿಕಿತ್ಸೆ ನೀಡುತ್ತಿರಲಿಲ್ಲ. ಈ ವೇಳೆ ಆಸ್ಪತ್ರೆ ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿಗಳೂ ಕೂಡ ನಡೆಯಿತು. ಬಳಿಕ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ತಿಳಿಸಿದ್ದೆ. ಮೊದಲು ದಾಖಲು ಮಾಡಲಾಗಿದ್ದ ಆಸ್ಪತ್ರೆಯಲ್ಲಿ ಎರಡು ಆ್ಯಂಬುಲೆನ್ಸ್ ಗಳಿದ್ದವು. ಆದರೆ, ಚಾಲಕರೇ ಇರಲಿಲ್ಲ. ಹೆಚ್ಎಎಲ್ ರಸ್ತೆಯಿಂದ ಮತ್ತೊಂದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾಕಷ್ಟು ಸಮಯವಾಗಿತ್ತು. ಮತ್ತೊಂದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ವಿನೋದ್ ಮೃತಪಟ್ಟಿದ್ದ ಎಂದು ವಿನೋದ್ ಸಂಬಂಧಿ ವೆಂಕಟೇಶ್ ಅವರು ಹೇಳಿದ್ದಾರೆ.