ಕೃಷ್ಣಮಠದ ಪಕ್ಕದಲ್ಲಿರುವ ಶೀರೂರು ಮಠದಲ್ಲಿ ಪೊಲೀಸರು ತಪಾಸಣೆ ಕಾರ್ಯಕ್ಕೆ ಮುಂದಾಗಿದ್ದು, ಶ್ರೀಗಳ ಕೊಠಡಿಯಲ್ಲಿ ರಾಶಿರಾಶಿ ಮದ್ಯದ ಬಾಟಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.. ಈ ಕೊಠಡಿಗೆ ಶ್ರೀಗಳನ್ನು ಬಿಟ್ಟು ಮತ್ಯಾರು ತೆರಳುತ್ತಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಪೊಲೀಸರು ಮಾಹಿತಿ ನೀಡಲು ನಿರಾಕರಿಸಿದ್ದಾರೆ.