ಶಿರೂರು ಶ್ರೀ ಅನುಮಾನಾಸ್ಪದ ಸಾವು: ತನಿಖೆಗೆ ಒತ್ತಾಯಿಸಿದ್ದ ಕೇಮಾರು ಶ್ರೀಗೆ ಜೀವ ಬೆದರಿಕೆ

ಶಿರೂರು ಶ್ರೀ ಅನುಮನಾಸ್ಪದ ಸಾವಿನ ಬಗ್ಗೆ ತನಿಖೆಗೆ ಒತ್ತಾಯಿಸಿದ್ದ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ....
ಕೇಮಾರು ಶ್ರೀ
ಕೇಮಾರು ಶ್ರೀ
ಉಡುಪಿ: ಶಿರೂರು ಶ್ರೀ ಅನುಮನಾಸ್ಪದ ಸಾವಿನ ಬಗ್ಗೆ ತನಿಖೆಗೆ ಒತ್ತಾಯಿಸಿದ್ದ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿ ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆ ಎದುರಿಸುತ್ತಿದ್ದಾರೆ.
ಶಿರೂರು ಶ್ರೀ ಅಸಹಜ ಸಾವಿನ ಬಗ್ಗೆ ಕೇಮಾರು ಮಾಧ್ಯಮಗಳ ಮುಂದೆ ಮಾತನಾಡಿದ್ದು ಹಾಗೂ ಎಸ್‍ಪಿಗೆ ಮನವಿ ಕೊಟ್ಟಿದ್ದಕ್ಕೆ ಬೆದರಿಕೆ ಕರೆ, ಸಂದೇಶಗಳು ಬಂದಿವೆ ಎಂದು ಕೇಮಾರು ಶ್ರೀ ಹೇಳಿದ್ದಾರೆ. ಅಲ್ಲದೆ ಈ ಸಂಬಂಧ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರನ್ನು ಭೇಟಿ ಮಾಡಿ, ಶಿರೂರು ಶ್ರೀಗಳ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದೇನೆ. ಇದರ ಬೆನ್ನಲ್ಲೇ ಕಳೆದ ಎರಡು ದಿನಗಳಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ. ಈಗಾಗಲೇ ಕಾನೂನು ತಜ್ಞರ ಸಲಹೆ ಪಡೆದಿದ್ದು ಶೀಘ್ರದಲ್ಲೇ ದೂರು ದಾಖಲಿಸುವುದಾಗಿ ಕೇಮಾರು ಶ್ರೀ ತಿಳಿಸಿದ್ದಾರೆ.
ಶಿರೂರು ದೇಹದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ ಅಂತ ಸುದ್ದಿಯಾದ ಬಳಿಕ ಮಾಧ್ಯಮಕ್ಕೆ ಮಾತನಾಡಿದ್ದ ಕೇಮಾರು ಶ್ರೀ, ಮಠದಲ್ಲಿ ಎಲ್ಲರು ಊಟ ಮಾಡಿದ್ದಾರೆ. ಆದ್ರೆ ಸ್ವಾಮೀಜಿಯೊಬ್ಬರಿಗೆ ಮಾತ್ರ ಯಾಕೆ ಫುಡ್ ಪಾಯಿಸನ್ ಆಗ್ಬೇಕು ಅಂತ ಪ್ರಶ್ನಿಸಿದ್ದರು. ಹಾಗೇ ಆಗೋದಾದ್ರೆ ಎಲ್ಲರೂ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಬೇಕಿತ್ತು. ಹೀಗಾಗಿ ಒಂದು ವೇಳೆ ಜಿಲ್ಲಾಡಳಿತ ಹಾಗು ಪೊಲೀಸ್ ಇಲಾಖೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com