ಇತ್ತೀಚಿಗಷ್ಟೇ ಮಾಧ್ಯಮಗಳಿಗೆ ನಿಯಂತ್ರಣ ಹೇರುವುದಕ್ಕಾಗಿ ಅತಿ ಭದ್ರತಾ ವಲಯ ಎಂದು ಘೋಷಿಸಲು ಸರ್ಕಾರ ಮುಂದಾಗಿದೆ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ಮಾಧ್ಯಮಗಳನ್ನು ನಿಯಂತ್ರಿಸಲು ಅಲ್ಲ. ವಿಧಾನಸೌಧಕ್ಕೆ ನಿತ್ಯವೂ ದಲ್ಲಾಳಿಗಳು ಬರುತ್ತಿದ್ದಾರೆ. ದಲ್ಲಾಳಿಗಳ ವಿಡಿಯೋ ಸಿಸಿಟಿವಿಗಳಲ್ಲಿ ರೆಕಾರ್ಡ್ ಆಗಿದೆ. ಇದರಿಂದ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ತೊಡಕಾಗುತ್ತಿದ್ದು, ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಈ ಹಾವಳಿ ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದ್ದರು.