ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಆಗಸ್ಟ್ 2ರಂದು ಉತ್ತರ ಕರ್ನಾಟಕ ಬಂದ್!

ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಆಗಸ್ಟ್‌ 2 ರಂದು ಬಂದ್‌ಗೆ ಕರೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು:  ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಹೋರಾಟ ಮತ್ತೆ ಕಾವು ಪಡೆದುಕೊಂಡಿದೆ. ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಆಗಸ್ಟ್‌ 2 ರಂದು  ಬಂದ್‌ಗೆ ಕರೆ ನೀಡಿದೆ. 
ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲೂ ಬಂದ್ ನಡೆಯಲಿದ್ದು ಈ ಸಂಬಂಧ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಗುವುದು ಎಂದು ಒಕ್ಕೂಟದ ನಾಯಕ ಸೋಮಶೇಖರ್ ಕೊತ್ತಂಬರಿ ತಿಳಿಸಿದ್ದಾರೆ. 
ಸಿಎಂ ಕುಮಾರಸ್ವಾಮಿ ನೇತೃತ್ವದ ಸರ್ಕಾರ, ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಪ್ರದೇಶಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಸಮಿತಿ ಆರೋಪಿಸಿದೆ.
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ರ್ಯಾಲಿ ಆಯೋಜನೆ ಮಾಡಿದ್ದು, ಉತ್ತರ ಕರ್ನಾಟಕ ಪ್ರದೇಶದ ನಾಯಕರು ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ. ಜತೆಗೆ, ಸುವರ್ಣ ಸೌಧದ ಬಳಿ ಭಾಷಣ ಮಾಡಲಿದ್ದಾರೆ. 
ಕಳೆದ 7 ದಶಕಗಳಿಂದ ಎಲ್ಲ ರಾಜಕೀಯ ಪಕ್ಷಗಳು ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದು, ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯ ಸರಕಾರಗಳು ಈ ಪ್ರದೇಶವನ್ನು ಅಭಿವೃದ್ಧಿ ಮಾಡಿಲ್ಲ ಎಂದು ಕೊತ್ತಂಬರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com