ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರ ಗ್ರಹಣ ವೇಳೆ ನೀವು ಗ್ರಾಮವನ್ನು ತೊರೆಯದಿದ್ದರೆ ರಕ್ತಕಾರಿ ಸಾಯುತ್ತೀರಾ ಎಂದು ಹೆದರಿಸಿದ್ದರಿಂದ 60ಕ್ಕೂ ಹೆಚ್ಚು ಕುಟುಂಬಗಳು ತಾವು ಸಾಕಿದ್ದ ಜಾನುವಾರುಗಳನ್ನು ಬಿಟ್ಟು ರಾತ್ರೋರಾತ್ರಿ ಗ್ರಾಮವನ್ನು ತೊರೆದ್ದು ಗುಳೆ ಹೊರಟು ಹೋಗಿದ್ದಾರೆ.