ಉತ್ತರ ಕರ್ನಾಟಕದ ಸ್ವಾಮೀಜಿಗಳು ಸಮುದಾಯ ಒಡೆಯಲು ನೋಡುತ್ತಿದ್ದಾರೆ: ವೀರಶೈವರ ಆರೋಪ

ಚಾಮರಾಜನಗರ ಜಿಲ್ಲೆ ವೀರಶೈವ ಮಹಾಸಭಾ ಅಧ್ಯಕ್ಷ ಕೊಡಸೊಗೆ ಶಿವಬಸಪ್ಪ ಮತ್ತು ಇತರ ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮೈಸೂರು: ಚಾಮರಾಜನಗರ ಜಿಲ್ಲೆ ವೀರಶೈವ ಮಹಾಸಭಾ ಅಧ್ಯಕ್ಷ ಕೊಡಸೊಗೆ ಶಿವಬಸಪ್ಪ ಮತ್ತು ಇತರ ವೀರಶೈವ ಕಾರ್ಯಕರ್ತರು ಲಿಂಗಾಯತ ಮಹಾಸಭಾ ಉದ್ಘಾಟನೆ ವಿರೋಧಿಸಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಯಿತು.

ಉತ್ತರ ಕರ್ನಾಟಕ ಭಾಗದ ಸ್ವಾಮೀಜಿಗಳು ವೀರಶೈವ-ಲಿಂಗಾಯತ ಸಮುದಾಯವನ್ನು ಇಬ್ಘಾಗ ಮಾಡಿ ರಾಜಕೀಯ ಪಕ್ಷಗಳ ಕೈಗೊಂಬೆಗಳಂತೆ ವರ್ತಿಸುತ್ತಾರೆ ಎಂದು ಆರೋಪಿಸಿದ ಕಾರ್ಯಕರ್ತರು ಶ್ರೀಗಳು ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಜೆಎಸ್ಎಸ್ ಶ್ರೀಗಳಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮತ್ತು ಶಿವಕುಮಾರ ಸ್ವಾಮಿಗಳು ಈ ವಿಚಾರದ ಕುರಿತು ಮಾತನಾಡಬೇಕೆಂದು ಒತ್ತಾಯಿಸಿದರು. ತಲೆತಲಾಂತರಗಳಿಂದ ವೀರಶೈವ ಮತ್ತು ಲಿಂಗಾಯತ ಸಮುದಾಯಗಳು ಒಟ್ಟಿಗೆ ಇರುವಾಗ ನೀವು ಏಕೆ ಇಬ್ಘಾಗ ಮಾಡಿ ಸಮಾಜವನ್ನು ಒಡೆಯಲು ನೋಡುತ್ತೀರಿ ಎಂದು ಸಾಣೆಹಳ್ಳಿಯ ಶಿವಾಚಾರ್ಯ ಸ್ವಾಮಿಗಳನ್ನು ಕೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com