ಭಾನುವಾರ ಬೆಳಿಗ್ಗೆ ನಡೆದ ಘಟನೆಯಲ್ಲಿ ಕೇರಳ ಮೂಲದ ಇರ್ಷಾದ್ ಮೃತಪಟ್ಟಿದ್ದಾನೆ. 100ಕ್ಕೂ ಅಧಿಕ ಯುವಕರ ತಂಡ ಇಂದು ನಂದಿ ಬೆಟ್ಟಕ್ಕೆ ಜಾಲಿ ರೈಡ್ ಹೊರಟಿತ್ತು. ಅವರೊಡನೆ ಇರ್ಷಾದ್ ಸಹ ತನ್ನ ದುಬಾರಿ ಬೈಕ್ ನಲ್ಲಿ ತೆರಳುತ್ತಿದ್ದ. ಆದರೆ ಬೈಕ್ ಏರ್ಪೋರ್ಟ್ ರಸ್ತೆಯ ಕೊಡಿಗೆ ಹಳ್ಳಿ ಬಳಿ ಫ್ಲೈ ಓವರ್ ಬಂದಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.