ಲಭ್ಯವಿರುವ ಸೀಟುಗಳ ಪೈಕಿ ಶೇ.50 ಸೀಟುಗಳನ್ನು ಕನ್ನಡಿಗರಿಗೆ ನೀಡಬೇಕು ಎಂದು ವಿಧೇಯಕ ತಿದ್ದುಪಡಿ ಮಾಡಿ ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಿತ್ತು. ಆದರೆ, ಈ ನಿಮಯಕ್ಕೆ ರಾಜ್ಯಪಾಲರು ಈವರೆಗೆ ಒಪ್ಪಿಗೆ ನೀಡಿಲ್ಲ. ಹೀಗಾಗಿ, 2018-19ನೇ ಸಾಲಿನ ಕನ್ನಡಿಗ ವಿದ್ಯಾರ್ಥಿಗಳಿಗೆ ಮೀಸಲಾತಿ ಸೌಲಭ್ಯದಿಂದ ವಂಚಿತರಾಗಲಿದ್ದಾರೆ. ರಾಜ್ಯಪಾಲರು ಅಂಕಿತ ಹಾಕಿದ ಬಳಿಕವಷ್ಟೇ ಕನ್ನಡಿಗರಿಗೆ ಮೀಸಲಾತಿ ಸೌಲಭ್ಯ ದೊರೆಯಲಿದೆ. ಕಾನೂನು ಶಾಲೆಗಳ ಮೀಸಲಾತಿಗಾಗಿ ಕನ್ನಡಿಗರು ಮತ್ತೊಂದು ವರ್ಷ ಕಾಯಬೇಕಿದೆ.