ರಜನಿ ಅಭಿನಯದ ಕಾಲಾ ಚಿತ್ರ ಬಿಡುಗಡೆ ಮಾಡದಂತೆ ಕನ್ನಡಪರ ಹೋರಾಟಗಾರರ ಒತ್ತಾಯ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಗೆ ಬೆಂಬಲ ನೀಡಿರುವ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದವು.
ಕಾಲಾ ಚಿತ್ರದ ಪೋಸ್ಟರ್
ಕಾಲಾ ಚಿತ್ರದ ಪೋಸ್ಟರ್
Updated on

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಗೆ ಬೆಂಬಲ ನೀಡಿರುವ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರವನ್ನು  ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು  ರಾಜ್ಯ  ಚಲನಚಿತ್ರ ವಾಣಿಜ್ಯ ಮಂಡಳಿ ಎದುರು  ಪ್ರತಿಭಟನೆ ನಡೆಸಿದವು.

ಶಿವಾನಂದ ವೃತ್ತದಲ್ಲಿ ರಸ್ತೆ ತಡೆ ನಡೆಯಲು ಪ್ರಯತ್ನಿಸಿದ ಪ್ರತಿಭಟನಾಕಾರರನ್ನು ಹೈ ಗ್ರೌಂಡ್ ಪೊಲೀಸರು ವಶಕ್ಕೆ ಪಡೆದುಕೊಂಡರು.

 ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ,  ರಾಜ್ಯಾದ್ಯಂತ ಕಾಲಾ ಚಿತ್ರ ಬಿಡುಗಡೆ ಮಾಡದಂತೆ  ವಾಣಿಜ್ಯ ಮಂಡಳಿ ಮೇಲೆ ಒತ್ತಡ ಹೇರಲಾಗಿದೆ. ಅಲ್ಲದೇ  ಚಿತ್ರ ಬಿಡುಗಡೆ ಮಾಡದಂತೆ ವಿತರಕರು ಹಾಗೂ ಥಿಯೇಟರ್ ಮಾಲೀಕರಿಗೂ  ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com