ಯಮಕನ ಮರಡಿ ಕಾಂಗ್ರೆಸ್ ಶಾಸಕರಾಗಿರುವ ಸತೀಶ್ ಜಾರಕೀಹೊಳಿ ಅವರ ನೂರಾರು ಬೆಂಬಲಿಗರು ಶಕ್ತಿಸೌಧ ವಿಧಾನಸೌಧದ ಹಿಂಭಾಗದಲ್ಲಿ ಧರಣಿ ಕುಳಿತಿದ್ದು, ಜಾರಕೀಹೊಳಿಯವರಿಗೆ ಸಚಿವ ಸ್ಥಾನ ನೀಡುವಂತೆ ಘೋಷಣೆಗಲನ್ನು ಕೂಗುತ್ತಿದ್ದಾರೆ. ಪ್ರತಿಭಟನೆ ಆರಂಭವಾಗುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದು ಸ್ಥಳದಿಂದ ಬಸ್ ನಲ್ಲಿ ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ.