ಯೋಧ ಅರ್ಜುನ್ ಅವರ ಪಾರ್ಥೀವ ಶರೀರವನ್ನು ಬೆಳಿಗ್ಗೆ 9.30ಕ್ಕೆ ಅಸ್ಸಾಂನಿಂದ ಕರೆತರಲಾಗಿತ್ತು. ಮೆರವಣಿಗೆ, ಸಾರ್ವಜನಿಕ ದರ್ಶನ ಮುಗಿದರೂ ಜಿಲ್ಲಾಡಳಿತ ಮಾತ್ರ ಅಂತ್ಯ ಸಂಸ್ಕಾರ ಎಲ್ಲಿ ನೆರವೇರಿಸಬೇಕು ಎಂಬುದರ ಬಗ್ಗೆ ಸ್ಪಷ್ಟ ನಿಲುವು ಪ್ರಕಟಿಸಿರಲಿಲ್ಲ. ಹೀಗಾಗಿ ತಮ್ಮ ಸ್ವಂತ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಲು ಮೃತನ ಕುಟುಂಬ ನಿರ್ಧರಿಸಿತು. ಆದರೆ, ಇದಕ್ಕೆ ಗ್ರಾಮಗ ಕೆಲವರು ವಿರೋಧಿಸಿ ಸಾರ್ವಜನಿಕ ಸ್ಥಳ ಅದರಲ್ಲೂ ಬಸ್ ನಿಲ್ದಾಣದಲ್ಲೇ ಅಂತ್ಯ ಸಂಸ್ಕಾರಕ್ಕೆ ಒತ್ತಾಯಿಸಿದರು.