ಮಧ್ಯಾಹ್ನದ ವೇಳೆಗೆ ರಾಜ್ಯಾದ್ಯಂತ ಸುಮಾರು 2 ಸಾವಿರ ಕನ್ನಡಪರ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು. ಸಂಜೆ ಬಿಡುಗಡೆ ಬಳಿಕವೂ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು ಎಂದು ತಿಳಿದುಬಂದಿದೆ. ಇನ್ನು ಮೈಸೂರು, ಹುಬ್ಬಳ್ಳಿ, ರಾಯಚೂರು, ಚಿಕ್ಕಬಳ್ಳಾಪುರ, ಆನೇಕಲ್, ಹಾಸನ ಮತ್ತು ದಾವಣಗೆರೆಯಲ್ಲಿ ಕಾಳಾ ಚಿತ್ರ ಪ್ರದರ್ಶನ ಮಾಡುತ್ತಿದ್ದ ಚಿತ್ರ ಮಂದಿರದ ಮೇಲೆ ಕೆಲ ದುಷ್ಕರ್ಮಿಗಳು ದಾಳಿ ಮಾಡಿ ಹಾನಿ ಮಾಡಿದ್ದಾರೆ.