ಸ್ಥಳಾಂತರಕ್ಕೆ ಭೂ ವಿವಾದದ ತೊಡಕಿರುವುದಾಗಿ ಅಧಿಕಾರಿಗಳು ಸಚಿವರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದಾರೆ. "ನಾವು ಸಚಿವರಿಗೆ ವಿವಾದದ ಕುರಿತಂತೆ ಮನವರಿಕೆ ಮಾಡಿಕೊಡಲು ಮುಂದಾದೆವು. ಆದರೆ ಸಚಿವರು ಎಲ್ಲಾ ಸಮಸ್ಯೆಗಳೂ ಪರಿಹಾರವಾಗಲಿದೆ, ಮೊದಲು ಕ್ಯಾಂಪಸ್ ನ್ನು ಸ್ಥಳಾಂತರಿಸಿ ಎಂದರು: ಅಧಿಕಾರಿಗಳು ಹೇಳಿದ್ದಾರೆ. ಕ್ಯಾಂಪಸ್ ಸ್ಥಳಾಂತರ ಕುರಿತಂತೆ ಬಾಕಿ ಉಳಿದಿರುವ ನ್ಯಾಯಾಲಯ ಪ್ರಕರಣಗಳ ವಿವರಗಳನ್ನು ಪಡೆಯಲು ವಿಶ್ವವಿದ್ಯಾನಿಲಯದ ಅಧಿಕಾರಿಗಳಿಗೆ ಶಿವಕುಮಾರ್ ಸೂಚಿಸಿದ್ದಾರೆ.